ನಮ್ಮ ತುಮಕೂರು ನಮ್ಮ ಹೆಮ್ಮೆ
ತುಮಕೂರು-ಬೆಂಗಳೂರಿನ ಹೆದ್ದಾರಿಯಲ್ಲಿರುವ ಕ್ಯಾತಸಂದ್ರದ ಬಳಿ ಇರುವ ಪುಣ್ಯಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠ ವಿಶ್ವವಿಖ್ಯಾತವಾಗಿದೆ. ಇಲ್ಲಿ ಜಾತಿ, ಮತ, ಲಿಂಗ ತಾರತಮ್ಯವಿಲ್ಲದೆ ನಿರಂತರವಾಗಿ ನೆಡೆಯುತ್ತಿರುವ ಜ್ಞಾನ ದಾಸೋಹ ಮತ್ತು ಅನ್ನ ದಾಸೋಹ ವಿಶ್ವಕ್ಕೆ ಮಾದರಿಯಾಗಿದೆ. ಮಠದ ವತಿಯಿಂದ ಪ್ರತಿ ದಿನ ಸಾವಿರಾರು ಜನ ಬಡ ವಿದ್ಯಾರ್ಥಿಗಳಿಗೆ ವಸತಿ, ಊಟ ಮತ್ತು ವಿದ್ಯಾದಾನ ನೆಡೆಯುತ್ತಿದೆ. ಅಧುನಿಕ ತುಮಕೂರನ್ನು ಪವಾಡದಂತೆ ಪ್ರಸಿದ್ಧಿಗೆ ತಂದ ಸಿದ್ಧಗಂಗಾ ಮಠಾಧೀಶರಾದ, ತ್ರಿವಿಧ ದಾಸೋಹಿ ೧೦೯ ವರ್ಷದ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು, ನೆಡೆದಾಡುವ ದೇವರೆಂದೇ ಪ್ರಖ್ಯಾತರಾಗಿದ್ದಾರೆ. ಸಿದ್ಧಗಂಗಾ ಮಠದ ಸಮೀಪ ಇರುವ ಕ್ಯಾತ್ಸಂದ್ರ, ತಟ್ಟೆಇಡ್ಲಿ ತಿನಿಸಿಗೆ ಖ್ಯಾತಿ ಪಡೆದಿದೆ. ಬೆಂಗಳೂರು - ಮಧುಗಿರಿ ಹೆದ್ದಾರಿಯಲ್ಲಿರುವ ಸಿದ್ದರ ಬೆಟ್ಟವು ಗಿಡಮೂಲಿಕೆಗಳಿಗೆ ಮತ್ತು ಅಲ್ಲಿ ಸಾಧನೆ ಮಾಡುತ್ತಿರುವ ಸಿದ್ಧರು ಮತ್ತು ಸಂತರಿಗಾಗಿ ಪ್ರಸಿದ್ಧವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿರುವ ಯೆಡಿಯೂರು ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಮತ್ತು ಕಗ್ಗೆರೆ ನಾಡಿನ ಪ್ರಮುಖ ವೀರಶೈವ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿವೆ. ತುಮಕೂರು ಜಿಲ್ಲೆಯಲ್ಲಿರುವ ತಿಪಟೂರು ತೆಂಗಿನ ಕೃಷಿಗೆ ಹೆಸರಾಗಿದ್ದು ಕಲ್ಪತರು ನಾಡು ಎಂದು ಖ್ಯಾತಿ ಪಡೆದಿದೆ. ತುಮಕುರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಲಕ್ಷ್ಮಿ ದೇವಸ್ಥಾನವು ರಾಜ್...